37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ|| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡುತ್ತಾ “ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯ ಮೂಡಿಸುವುದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಧ್ಯೇಯವಾಗಿದೆ. ವಿದ್ಯರ‍್ಥಿಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಬೆಂಬಲಿಸದೆ ರಾಷ್ಟ್ರದ ಅಭ್ಯುದಯದತ್ತ ಗಮನವೀಯಬೇಕು. ಕ್ರೌರ್ಯತೆಗೆ ಯಾವುದೇ ಜಾತಿ, ಧರ್ಮ ಗಳ ಹಂಗಿಲ್ಲ. ವಿವೇಕದ ಅರಿವು ನಮ್ಮಲ್ಲಿ ಜಾಗೃತವಾದಾಗ ಮಾತ್ರ ಭಯೋತ್ಪಾದನೆಯ ನಿರ್ಮೂಲನೆ ಸಾಧ್ಯ.”ಎಂದು ನುಡಿದರು.

ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್‍ಯಕ್ರಮವನ್ನುಅರ್ಥಪೂರ್ಣವಾಗಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ||ರಾಧಾಕೃಷ್ಣ ಗೌಡ ಅವರು ಸ್ವಾಗತಿಸಿ, ಕಾಲೇಜಿನ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!