25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ|| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡುತ್ತಾ “ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯ ಮೂಡಿಸುವುದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಧ್ಯೇಯವಾಗಿದೆ. ವಿದ್ಯರ‍್ಥಿಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಬೆಂಬಲಿಸದೆ ರಾಷ್ಟ್ರದ ಅಭ್ಯುದಯದತ್ತ ಗಮನವೀಯಬೇಕು. ಕ್ರೌರ್ಯತೆಗೆ ಯಾವುದೇ ಜಾತಿ, ಧರ್ಮ ಗಳ ಹಂಗಿಲ್ಲ. ವಿವೇಕದ ಅರಿವು ನಮ್ಮಲ್ಲಿ ಜಾಗೃತವಾದಾಗ ಮಾತ್ರ ಭಯೋತ್ಪಾದನೆಯ ನಿರ್ಮೂಲನೆ ಸಾಧ್ಯ.”ಎಂದು ನುಡಿದರು.

ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್‍ಯಕ್ರಮವನ್ನುಅರ್ಥಪೂರ್ಣವಾಗಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ||ರಾಧಾಕೃಷ್ಣ ಗೌಡ ಅವರು ಸ್ವಾಗತಿಸಿ, ಕಾಲೇಜಿನ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!