23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!