25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya
error: Content is protected !!