September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!