23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya
error: Content is protected !!