July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಅಡಿಕೆ ಎಲೆಚುಕ್ಕೆ ಬಾಧೆ ತೀವ್ರವಾಗಿ, ಅಡಿಕೆ ಬೆಳೆಯ ಉತ್ಪಾದಕತೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವೈಜ್ಞಾನಿಕ ಸಮಿತಿ ರಚಿಸಿ ರೈತರಿಗೆ ಸಹಾಯವಾಗುವಂತೆ ಸಹಾಯಧನ ನೀಡಲು ಶಿಫಾರಸ್ಸು ಮಾಡಿದೆ. ಅದರಂತೆ ರೈತರು ಅಡಿಕೆ ಎಲೆಚುಕ್ಕೆ ರೋಗ ಸಮಗ್ರ ನಿರ್ವಹಣೆಗೆ ಶೇ.30ರ ಸಹಾಯಧನದಂತೆ ರೈತರು ಖರೀದಿ ಮಾಡಿದ ಶಿಲೀಂದ್ರನಾಶಕ/ಪೋಷಕಾಂಶಗಳ ಜಿ ಎಸ್ ಟಿ ನಮೂದು ಹೊಂದಿದ ಮತ್ತು ಎ. 2025ರ ನಂತರ ಖರೀದಿಸಿರುವ ಬಿಲ್ಲುಗಳನ್ನು ಯೋಜನೆಯ ಮಾರ್ಗಸೂಚಿಯಂತೆ ನಿಗದಿಪಡಿಸಿದ ಅರ್ಜಿ ಜೊತೆಗೆ ಬೆಳ್ತಂಗಡಿ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಜೊತೆಗೆ ಪಹಣಿ (RTC), ಆಧಾರ್ ಪ್ರತಿ. ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ಎ. 2025ರ ನಂತರ ಖರೀದಿಸಿದ ಜಿ ಎಸ್ ಟಿ ಹೊಂದಿರುವ ಮೂಲ ಬಿಲ್ಲುಗಳನ್ನು ಸಲ್ಲಿಸುವುದು. ವರ್ಗವಾರು, ಅರ್ಜಿಗಳ ಜತೆಗನುಗುಣವಾಗಿ ತಾಲೂಕಿಗೆ ಹಂಚಿಕೆಯಾದ ಅನುದಾನದಂತೆ ಸಹಾಯಧನಕ್ಕೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ : ಮಹಾವೀರ ಶೇಬಣ್ಣವರನೇ 8123921087, ವೇಣೂರು ಹೋಬಳಿ : ಭೀಮರಾಯ ಸೊಡಗಿ 9741713598 , ಕೊಕ್ಕಡ ಹೋಬಳಿ : ಮಲ್ಲಿನಾಥ ಬಿರಾದಾರ 9986411477, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863.

Related posts

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!