September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗದ ರೋಷವನ್ನು ವ್ಯಕ್ತಪಡಿಸಿತು. ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.

ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ.ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವನ್ಯಜೀವಿಗಳು ಮಾನವ ಸಂಪರ್ಕದಿಂದ ತೀವ್ರ ಒತ್ತಡಕ್ಕೆ ಒಳಗಾಗುತ್ತವೆ. ಈ ತರಹದ ವರ್ತನೆ ಮುಂದಿನ ದಿನಗಳಲ್ಲಿ ದುರಂತಗಳಿಗೆ ದಾರಿಯಾಗಬಹುದು ಎಂದು ಎಚ್ಚರಿಸಿದ್ದಾರೆ.

Related posts

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya
error: Content is protected !!