23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ|| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡುತ್ತಾ “ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯ ಮೂಡಿಸುವುದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಧ್ಯೇಯವಾಗಿದೆ. ವಿದ್ಯರ‍್ಥಿಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಬೆಂಬಲಿಸದೆ ರಾಷ್ಟ್ರದ ಅಭ್ಯುದಯದತ್ತ ಗಮನವೀಯಬೇಕು. ಕ್ರೌರ್ಯತೆಗೆ ಯಾವುದೇ ಜಾತಿ, ಧರ್ಮ ಗಳ ಹಂಗಿಲ್ಲ. ವಿವೇಕದ ಅರಿವು ನಮ್ಮಲ್ಲಿ ಜಾಗೃತವಾದಾಗ ಮಾತ್ರ ಭಯೋತ್ಪಾದನೆಯ ನಿರ್ಮೂಲನೆ ಸಾಧ್ಯ.”ಎಂದು ನುಡಿದರು.

ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್‍ಯಕ್ರಮವನ್ನುಅರ್ಥಪೂರ್ಣವಾಗಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ||ರಾಧಾಕೃಷ್ಣ ಗೌಡ ಅವರು ಸ್ವಾಗತಿಸಿ, ಕಾಲೇಜಿನ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು.

Related posts

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya
error: Content is protected !!