July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

ಪುತ್ತೂರು: ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಜಂಟಿ ಆಶ್ರಯದಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ವನ್ನು ಕಾಲೇಜಿನ ಸ್ಪಂದನ ಸಭಾಂಗಣ ದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ|| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡುತ್ತಾ “ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯ ಮೂಡಿಸುವುದು ಭಯೋತ್ಪಾದನಾ ವಿರೋಧಿ ದಿನಾಚರಣೆಯ ಧ್ಯೇಯವಾಗಿದೆ. ವಿದ್ಯರ‍್ಥಿಗಳು ಹಿಂಸಾತ್ಮಕ ಚಟುವಟಿಕೆಗಳನ್ನು ಬೆಂಬಲಿಸದೆ ರಾಷ್ಟ್ರದ ಅಭ್ಯುದಯದತ್ತ ಗಮನವೀಯಬೇಕು. ಕ್ರೌರ್ಯತೆಗೆ ಯಾವುದೇ ಜಾತಿ, ಧರ್ಮ ಗಳ ಹಂಗಿಲ್ಲ. ವಿವೇಕದ ಅರಿವು ನಮ್ಮಲ್ಲಿ ಜಾಗೃತವಾದಾಗ ಮಾತ್ರ ಭಯೋತ್ಪಾದನೆಯ ನಿರ್ಮೂಲನೆ ಸಾಧ್ಯ.”ಎಂದು ನುಡಿದರು.

ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮೂಲಕ ಕಾರ್‍ಯಕ್ರಮವನ್ನುಅರ್ಥಪೂರ್ಣವಾಗಿಸಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ||ವಿಜಯ ಕುಮಾರ್ ಎಂ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ||ರಾಧಾಕೃಷ್ಣ ಗೌಡ ಅವರು ಸ್ವಾಗತಿಸಿ, ಕಾಲೇಜಿನ ಯಕ್ಷಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya
error: Content is protected !!