25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಭಜನಾಮಂದಿರ ಕರಾಯ ಇಲ್ಲಿ ಮಕ್ಕಳಿಗೆ ಒಂದು ವಾರದ ಕುಣಿತ ಭಜನಾ ತರಬೇತಿಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯದ ಆಡಳಿತ ಮೊಕ್ತೇಸರರಾದ ಅನಂತಕೃಷ್ಣ ಕುದ್ದನಾಯ ದೀಪ ಪ್ರಜ್ವಲನೆ ಮಾಡುವುದರ ಮುಖಾಂತರ ಉದ್ಘಾಟಿಸಿ,
ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾದ ನಿವೃತ ಸರ್ಕಲ್ ಇನ್ಸ್ಪೆಕ್ಟರ್ ಸುದರ್ಶನ್ ಕೊಲ್ಲಿ ಮಾತಾನಾಡಿ ಹಿಂದಿನ ಕಾಲದಲ್ಲಿ ಪ್ರತಿಯೊಂದು ಮನೆಯಲ್ಲೂ ಭಜನೆ ನಡೆಯುತ್ತ ಇತ್ತು ಆದ್ರೆ ಇಂದಿನ ಕಾಲದಲ್ಲಿ ಭಜನೆ ಮಾಡುವ ಮನೆಗಳು ಸಿಗುವುದು ಬಹಳ ವಿರಳ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾಯದ ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ಮಾತಾಡಿ ಭಜನೆ ಮಾಡಿದಲ್ಲಿ ವಿಭಜನೆ ಇಲ್ಲ ಎಂಬ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಅಶೋಕ್ ಹಿರಿಯರಾದ ಗೋಪಾಲಕೃಷ್ಣ ಪೈ, ಭಜನಾಪರಿಷತ್ ನ ಸಮನ್ವಯಧಿಕಾರಿ ಸಂತೋಷ್ ಪಿ. ಅಳಿಯೂರು ಭಜನಾ ತರಬೇತುದಾರರಾದ ಆಕಾಶ್ ಹಾಗೂ ಭಜನಾಪರಿಷತ್ ಪದಾಧಿಕಾರಿಗಳು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.ನಿವೃತ್ತ ಶಿಕ್ಷಕ ಯುವರಾಜ್ ನಿರೂಪಿಸಿದರು. ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಸ್ವಾಗತಿಸಿ, ತಣ್ಣೀರುಪಂತ ವಲಯದ ವಲಯ ಅಧ್ಯಕ್ಷ ರಾಜಶೇಖರ್ ರೈ ವಂದಿಸಿದರು.

Related posts

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya
error: Content is protected !!