25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ


ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವ ಉದ್ದೇಶಕ್ಕಾಗಿ ಎರಡು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ. ಜಗದೀಶ್ ಪ್ರಸಾದ್ ಅವರು ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್‌ಗಳ ಆಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಅವಧಿಯಲ್ಲಿ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರ‍್ಸ್‌ಗಳ ಸಮಾವೇಶವನ್ನು ಸಂಘಟಿಸಿದ್ದರು. ಇವರು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆ ಗಳಿಸಿದ್ದಾರೆ.

Related posts

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!