23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ


ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವ ಉದ್ದೇಶಕ್ಕಾಗಿ ಎರಡು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ. ಜಗದೀಶ್ ಪ್ರಸಾದ್ ಅವರು ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್‌ಗಳ ಆಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಅವಧಿಯಲ್ಲಿ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರ‍್ಸ್‌ಗಳ ಸಮಾವೇಶವನ್ನು ಸಂಘಟಿಸಿದ್ದರು. ಇವರು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆ ಗಳಿಸಿದ್ದಾರೆ.

Related posts

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

Suddi Udaya
error: Content is protected !!