30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ರಿಕ್ಷಾ ಚಾಲಕ ಮುಂಡಾಜೆ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರಿಗೂ ಶಸ್ತ್ರಚಿಕಿತ್ಸೆ ನಡೆಸಬೇಕಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ 7 ಕಿಮೀ ವ್ಯಾಪ್ತಿಯ ರಸ್ತೆಯ ಸುಮಾರು 6 ಕಡೆಗಳಲ್ಲಿ ಕಿರು ಸೇತುವೆಗಳಿದ್ದು ಅವು ಅಗಲ ಕಿರಿದಾದ ಕಾರಣ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಕಳೆದ 7 ವರ್ಷಗಳ ಹಿಂದೆ ಈ ರಸೆ ವಿಸ್ತರಣೆಯಾಗಿದ್ದು ಈ ಸಮಯ ಈ ಕಿರುಸೇತುವೆಗಳ ಅಭಿವೃದ್ಧಿ ಕಾಮಗಾರಿ ನಡೆದಿರಲಿಲ್ಲ. ಇದರ ಬಳಿಕ ಜನಪ್ರತಿನಿಧಿ, ಇಲಾಖೆಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.


ಶಿಥಿಲ ಕಿರು ಸೇತುವೆಗಳಿರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಜಿಲ್ಲಾಧಿಕಾರಿ ಸಂಚಾರ ನಿಷೇಧವನ್ನು ಹೇಳಿದ್ದರು. ಆದರೂ ಈ ಅಪಾಯದ ಮಧ್ಯೆ ಇಲ್ಲಿ ವಾಹನ ಸಂಚಾರ ಯಾವುದೇ ಎಗ್ಗಿಲ್ಲದೆ ನಡೆಯುತ್ತಿತ್ತು.
ಇಲ್ಲಿನ ಕೆಲವು ಕಿರು ಸೇತುವೆಗಳು ಸಂಪೂರ್ಣ ಶಿಥಿಲವಾಸ್ಥೆ ತಲುಪಿದ್ದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ವಿಷ್ಣು ಭಟ್ ತಿಳಿಸಿದ್ದಾರೆ.

Related posts

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya
error: Content is protected !!