September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ರಿಕ್ಷಾ ಚಾಲಕ ಮುಂಡಾಜೆ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರಿಗೂ ಶಸ್ತ್ರಚಿಕಿತ್ಸೆ ನಡೆಸಬೇಕಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ 7 ಕಿಮೀ ವ್ಯಾಪ್ತಿಯ ರಸ್ತೆಯ ಸುಮಾರು 6 ಕಡೆಗಳಲ್ಲಿ ಕಿರು ಸೇತುವೆಗಳಿದ್ದು ಅವು ಅಗಲ ಕಿರಿದಾದ ಕಾರಣ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಕಳೆದ 7 ವರ್ಷಗಳ ಹಿಂದೆ ಈ ರಸೆ ವಿಸ್ತರಣೆಯಾಗಿದ್ದು ಈ ಸಮಯ ಈ ಕಿರುಸೇತುವೆಗಳ ಅಭಿವೃದ್ಧಿ ಕಾಮಗಾರಿ ನಡೆದಿರಲಿಲ್ಲ. ಇದರ ಬಳಿಕ ಜನಪ್ರತಿನಿಧಿ, ಇಲಾಖೆಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.


ಶಿಥಿಲ ಕಿರು ಸೇತುವೆಗಳಿರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಜಿಲ್ಲಾಧಿಕಾರಿ ಸಂಚಾರ ನಿಷೇಧವನ್ನು ಹೇಳಿದ್ದರು. ಆದರೂ ಈ ಅಪಾಯದ ಮಧ್ಯೆ ಇಲ್ಲಿ ವಾಹನ ಸಂಚಾರ ಯಾವುದೇ ಎಗ್ಗಿಲ್ಲದೆ ನಡೆಯುತ್ತಿತ್ತು.
ಇಲ್ಲಿನ ಕೆಲವು ಕಿರು ಸೇತುವೆಗಳು ಸಂಪೂರ್ಣ ಶಿಥಿಲವಾಸ್ಥೆ ತಲುಪಿದ್ದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ವಿಷ್ಣು ಭಟ್ ತಿಳಿಸಿದ್ದಾರೆ.

Related posts

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya
error: Content is protected !!