September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರಾಗಿದ್ದಾರೆ.
ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು ಈ ವೇಳೆ ಪ್ರವೀಣ್ ಓಡಿ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ.

ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿದ್ದಾರೆ.

Related posts

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!