22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮೇ 25 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ1.00 ರವರೆಗೆ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ.

ಕಣ್ಣಿನ ತಜ್ಞರಾದ ಡಾ| ಸುಭಾಶ್ಚಂದ್ರ ಕಣ್ಣಿನ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ, 25% ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಕನ್ನಡಕ ದೊರೆಯಲಿದೆ.

ಕಣ್ಣಿನ ಪೊರೆಗೆ ಚಿಕಿತ್ಸೆ ಮತ್ತು ಲೆನ್ಸ್ ಅಳವಡಿಕೆ, ದೃಷ್ಟಿದೋಷ ನಿವಾರಣೆ, ಕಂಪ್ಯೂಟರೈಸ್ಡ್ ಕಣ್ಣಿನ ಚಿಕಿತ್ಸೆ, ಕಾರ್ನಿಯಾ ರೆಟಿನಾ ಸ್ಕ್ರಿನಿಂಗ್, ಕಣ್ಣಿನ ದುರ್ಮಾಂಸ ಚಿಕಿತ್ಸೆ, ಮೆಳ್ಳೆಗಣ್ಣು ಚಿಕಿತ್ಸೆ, ಕಾಂಟಾಕ್ಟ್ಲೆನ್ಸ್ ಕ್ಲಿನಿಕ್, ಡಯಾಬಿಟಿಕ್ ಕಣ್ಣಿನ ಚಿಕಿತ್ಸೆ, ಮುಂತಾದ ಸೇವೆಗಳು ಲಭ್ಯವಿದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!