22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಭಜನಾಮಂದಿರ ಕರಾಯ ಇಲ್ಲಿ ಮಕ್ಕಳಿಗೆ ಒಂದು ವಾರದ ಕುಣಿತ ಭಜನಾ ತರಬೇತಿಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯದ ಆಡಳಿತ ಮೊಕ್ತೇಸರರಾದ ಅನಂತಕೃಷ್ಣ ಕುದ್ದನಾಯ ದೀಪ ಪ್ರಜ್ವಲನೆ ಮಾಡುವುದರ ಮುಖಾಂತರ ಉದ್ಘಾಟಿಸಿ,
ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾದ ನಿವೃತ ಸರ್ಕಲ್ ಇನ್ಸ್ಪೆಕ್ಟರ್ ಸುದರ್ಶನ್ ಕೊಲ್ಲಿ ಮಾತಾನಾಡಿ ಹಿಂದಿನ ಕಾಲದಲ್ಲಿ ಪ್ರತಿಯೊಂದು ಮನೆಯಲ್ಲೂ ಭಜನೆ ನಡೆಯುತ್ತ ಇತ್ತು ಆದ್ರೆ ಇಂದಿನ ಕಾಲದಲ್ಲಿ ಭಜನೆ ಮಾಡುವ ಮನೆಗಳು ಸಿಗುವುದು ಬಹಳ ವಿರಳ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾಯದ ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ಮಾತಾಡಿ ಭಜನೆ ಮಾಡಿದಲ್ಲಿ ವಿಭಜನೆ ಇಲ್ಲ ಎಂಬ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಅಶೋಕ್ ಹಿರಿಯರಾದ ಗೋಪಾಲಕೃಷ್ಣ ಪೈ, ಭಜನಾಪರಿಷತ್ ನ ಸಮನ್ವಯಧಿಕಾರಿ ಸಂತೋಷ್ ಪಿ. ಅಳಿಯೂರು ಭಜನಾ ತರಬೇತುದಾರರಾದ ಆಕಾಶ್ ಹಾಗೂ ಭಜನಾಪರಿಷತ್ ಪದಾಧಿಕಾರಿಗಳು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.ನಿವೃತ್ತ ಶಿಕ್ಷಕ ಯುವರಾಜ್ ನಿರೂಪಿಸಿದರು. ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಸ್ವಾಗತಿಸಿ, ತಣ್ಣೀರುಪಂತ ವಲಯದ ವಲಯ ಅಧ್ಯಕ್ಷ ರಾಜಶೇಖರ್ ರೈ ವಂದಿಸಿದರು.

Related posts

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya
error: Content is protected !!