September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಭಜನಾಮಂದಿರ ಕರಾಯ ಇಲ್ಲಿ ಮಕ್ಕಳಿಗೆ ಒಂದು ವಾರದ ಕುಣಿತ ಭಜನಾ ತರಬೇತಿಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕರಾಯದ ಆಡಳಿತ ಮೊಕ್ತೇಸರರಾದ ಅನಂತಕೃಷ್ಣ ಕುದ್ದನಾಯ ದೀಪ ಪ್ರಜ್ವಲನೆ ಮಾಡುವುದರ ಮುಖಾಂತರ ಉದ್ಘಾಟಿಸಿ,
ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾದ ನಿವೃತ ಸರ್ಕಲ್ ಇನ್ಸ್ಪೆಕ್ಟರ್ ಸುದರ್ಶನ್ ಕೊಲ್ಲಿ ಮಾತಾನಾಡಿ ಹಿಂದಿನ ಕಾಲದಲ್ಲಿ ಪ್ರತಿಯೊಂದು ಮನೆಯಲ್ಲೂ ಭಜನೆ ನಡೆಯುತ್ತ ಇತ್ತು ಆದ್ರೆ ಇಂದಿನ ಕಾಲದಲ್ಲಿ ಭಜನೆ ಮಾಡುವ ಮನೆಗಳು ಸಿಗುವುದು ಬಹಳ ವಿರಳ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾಯದ ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ಮಾತಾಡಿ ಭಜನೆ ಮಾಡಿದಲ್ಲಿ ವಿಭಜನೆ ಇಲ್ಲ ಎಂಬ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಅಶೋಕ್ ಹಿರಿಯರಾದ ಗೋಪಾಲಕೃಷ್ಣ ಪೈ, ಭಜನಾಪರಿಷತ್ ನ ಸಮನ್ವಯಧಿಕಾರಿ ಸಂತೋಷ್ ಪಿ. ಅಳಿಯೂರು ಭಜನಾ ತರಬೇತುದಾರರಾದ ಆಕಾಶ್ ಹಾಗೂ ಭಜನಾಪರಿಷತ್ ಪದಾಧಿಕಾರಿಗಳು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.ನಿವೃತ್ತ ಶಿಕ್ಷಕ ಯುವರಾಜ್ ನಿರೂಪಿಸಿದರು. ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ಸ್ವಾಗತಿಸಿ, ತಣ್ಣೀರುಪಂತ ವಲಯದ ವಲಯ ಅಧ್ಯಕ್ಷ ರಾಜಶೇಖರ್ ರೈ ವಂದಿಸಿದರು.

Related posts

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya
error: Content is protected !!