23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಜೋಡಣೆಗೊಳಿಸಿದ್ದ ಹಲಗೆಗಳನ್ನು ತೆರವುಗೊಳಿಸುವ ಕಾರ್ಯ ಸಣ್ಣ ನೀರಾವರಿ ಇಲಾಖೆಯಿಂದ ನಡೆಯುತ್ತಿದೆ. ಕಲ್ಮಂಜ ಗ್ರಾಮದ ನಿಡಿಗಲ್ ಕಿಂಡಿ ಅಣೆಕಟ್ಟಿಗೆ ಜೋಡಿಸಿದ್ದ ಹಲಗೆಯನ್ನು ಈಗಾಗಲೇ ತೆರವು ಮಾಡಲಾಗುತ್ತಿದ್ದು ತಾಲೂಕಿನಲ್ಲಿ 73 ಕಿಂಡಿ ಅಣೆಕಟ್ಟುಗಳಿದ್ದು ಮಳೆಗಾಲಕ್ಕಿಂತ ಮುಂಚಿತವಾಗಿ ಹಲಗೆ ಇರುವ ಅಣೆಕಟ್ಟುಗಳಿಂದ ತೆರವು ಕಾರ್ಯ ಮಾಡಲಾಗುತ್ತಿದೆ. ಕಳೆದ 3-4ದಿನಗಳಿಂದ ತೆರವು ಕಾರ್ಯ ಆರಂಭವಾಗಿದ್ದು ಮುಂಡಾಜೆ, ವೇಣೂರು ನಡ್ತಿಕಲ್ಲು, ಚಂದ್ಕೂರು, ಲಾಯಿಲ-ಪುತ್ರಬೈಲು, ಸುಲ್ಕೇರಿಮೊಗ್ರು, ಲಾಯಿಲ ರಾಘವೇಂದ್ರ ಮಠ ಸಹಿತ ವಿವಿಧ ಜೋಡಿಸಿದ್ದ ಹಲಗೆಗಳನ್ನು ತೆಗೆಯುತ್ತಿದ್ದು ಜೂನ್ ತಿಂಗಳ ಮೊದಲ ವಾರದಲ್ಲಿ ತೆರವು ಕಾರ್ಯ ಪೂರ್ಣಗೊಳ್ಳಲಿದೆ.

ಈ ಬಾರಿ ಬೇಸಿಗೆ ಮಳೆಯಿಂದಾಗಿ ಕಿಂಡಿ ಅಣೆಕಟ್ಟುಗಳಲ್ಲಿ ಭರಪೂರ ನೀರು ತುಂಬಿ ಜಲಧಾರೆ ಉಂಟಾಗಿತ್ತು. ಫೆಬ್ರವರಿ ಮತ್ತು ಮಾರ್ಚ ತಿಂಗಳಿನಲ್ಲಿ ಬಿಸಿಲ ತಾಪಕ್ಕೆ ಹೊಳೆ, ಹಳ್ಳಗಳಲ್ಲಿ ನೀರಿನ ಹರಿವು ಕಡಿಮೆಯಾಗಿತ್ತು ಆದರೆ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸುರಿದ ಬೇಸಿಗೆ ಮಳೆಗೆ ಸಮೃದ್ಧವಾಗಿ ಜೀವ ಜಲ ತುಂಬಿತ್ತು. ಅಣೆಕಟ್ಟಿನಲ್ಲಿ ನೀರು ಶೇಖರಣೆಯಾಗಿ ಕೃಷಿ ಭೂಮಿಗೆ ಸಹಕಾರಿಯಾಗಿದ್ದು, ಬಾವಿ, ಕೊಳವೆ ಬಾವಿ, ಕೆರೆಗಳಲ್ಲಿ ಅಂರ್ತಜಲ ವೃದ್ಧಿಗೆ ಸಹಕಾರಿಯಾಗಿದೆ. ಬೇಸಿಗೆ ಮಳೆ ನೀರಿನ ತತ್ವಾರವನ್ನು ನಿಗಿಸಿದೆ. ಕೆಲ ತಿಂಗಳ ಹಿಂದೆ ಮಾಧ್ಯಮಗಳ ನಿರಂತರ ವರದಿಗಳ ಬಳಿಕ ತಾಲೂಕಿನ ವಿವಿಧ ಅಣೆಕಟ್ಟುಗಳಲ್ಲಿ ಹಲಗೆ ಜೋಡಣೆ ಕಾರ್ಯ ಚುರುಕು ಪಡೆದಿತ್ತು.

-ವರದಿ ಮನೀಶ್ ವಿ.ಅಂಚನ್ ಕುಕ್ಕಿನಡ್ಡ

Related posts

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya
error: Content is protected !!