July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಬೆಳಾಲು: ಗ್ರಾಮೀಣ ಮಕ್ಕಳಿಗಾಗಿ ಬೆಳಾಲು ಗ್ರಾಮ ಪಂಚಾಯಿತ್ ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಮೇ15 ರಿಂದ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರ ಅಧ್ಯಕ್ಷತೆಯಲ್ಲಿ ಮೇ 22 ರಂದು ನಡೆಯಿತು.

ವೇದಿಕೆಯಲ್ಲಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ ,ಬೆಳ್ತಂಗಡಿ ತಾಲೂಕು ಪಂಚಾಯಿತ್ ನರೇಗಾ ತಾಂತ್ರಿಕ ಸಹಾಯಕರಾದ ಶ್ರೀಮತಿ ರೇಷ್ಮಾ ಹಾಗೂ ತಾಲೂಕು ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಿಶಾ ಬನಂದೂರು ಉಪಸ್ಥಿತರಿದ್ದರು.

ಶಿಬಿರಾರ್ಥಿ ಚಾರ್ವಿ ಪ್ರಾರ್ಥಿಸಿ, ದೀಪ್ತಿ ಸ್ವಾಗತಿಸಿದರು. ದೀಕ್ಷಾ ಶಿಬಿರದ ಅನಿಸಿಕೆಯನ್ನು ಹೇಳಿದರು. ಶಿಬಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಅರಿವು ಕೇಂದ್ರದ ಮೇಲ್ವಿಚಾರಕರಾದ ಡೀಕಯ್ಯ ಗೌಡ ಅರಣೆಮಾರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya
error: Content is protected !!