22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ರಿಕ್ಷಾ ಚಾಲಕ ಮುಂಡಾಜೆ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರಿಗೂ ಶಸ್ತ್ರಚಿಕಿತ್ಸೆ ನಡೆಸಬೇಕಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ 7 ಕಿಮೀ ವ್ಯಾಪ್ತಿಯ ರಸ್ತೆಯ ಸುಮಾರು 6 ಕಡೆಗಳಲ್ಲಿ ಕಿರು ಸೇತುವೆಗಳಿದ್ದು ಅವು ಅಗಲ ಕಿರಿದಾದ ಕಾರಣ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಕಳೆದ 7 ವರ್ಷಗಳ ಹಿಂದೆ ಈ ರಸೆ ವಿಸ್ತರಣೆಯಾಗಿದ್ದು ಈ ಸಮಯ ಈ ಕಿರುಸೇತುವೆಗಳ ಅಭಿವೃದ್ಧಿ ಕಾಮಗಾರಿ ನಡೆದಿರಲಿಲ್ಲ. ಇದರ ಬಳಿಕ ಜನಪ್ರತಿನಿಧಿ, ಇಲಾಖೆಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.


ಶಿಥಿಲ ಕಿರು ಸೇತುವೆಗಳಿರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಜಿಲ್ಲಾಧಿಕಾರಿ ಸಂಚಾರ ನಿಷೇಧವನ್ನು ಹೇಳಿದ್ದರು. ಆದರೂ ಈ ಅಪಾಯದ ಮಧ್ಯೆ ಇಲ್ಲಿ ವಾಹನ ಸಂಚಾರ ಯಾವುದೇ ಎಗ್ಗಿಲ್ಲದೆ ನಡೆಯುತ್ತಿತ್ತು.
ಇಲ್ಲಿನ ಕೆಲವು ಕಿರು ಸೇತುವೆಗಳು ಸಂಪೂರ್ಣ ಶಿಥಿಲವಾಸ್ಥೆ ತಲುಪಿದ್ದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ವಿಷ್ಣು ಭಟ್ ತಿಳಿಸಿದ್ದಾರೆ.

Related posts

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya
error: Content is protected !!