37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರಾಗಿದ್ದಾರೆ.
ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು ಈ ವೇಳೆ ಪ್ರವೀಣ್ ಓಡಿ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ.

ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya
error: Content is protected !!