22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಪ್ರಾರ್ಥನಾ ಎಚ್.ಕೆ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೇ ರ‍್ಯಾಂಕ್ ಗಳಿಸಿ ಅಮೋಘ ಸಾಧನೆ ಗೈದಿದ್ದಾರೆ. ಬಂಟ್ಯಾಳ ತಾಲ್ಲೂಕಿಗೆ ಪ್ರಥಮ ರ‍್ಯಾಂಕ್ ಗಳಿಸಿದ ಇವರು ಹಾಗೂ ಶಾಲೆಗೆ ಪ್ರಥಮ ಸ್ಥಾನದಿಂದ ತೇರ್ಗೆಡೆ ಹೊಂದಿದ್ದಾರೆ. ಇವರು ಉಳಿ ಗ್ರಾಮದ ಕೇರಿಯಾ ನಿವಾಸಿ ಕಕ್ಯಪದವಿನ ಉದ್ಯಮಿಯಾದ ಹರಿಶ್ಚಂದ್ರ ಮತ್ತು ಕುಶಲ ದಂಪತಿಯ ಪುತ್ರಿ.

ಪ್ರಾರ್ಥನಾ ಈ ಹಿಂದೆ ಹಿಂದಿ ಮತ್ತು ವಿಜ್ಞಾನ ವಿಷಯದಲ್ಲಿ 99 ಅಂಕ ಗಳಿಸಿದ್ದರು. ಆದರೆ ಮರು ಮೌಲ್ಯ ಮಾಪನದಲ್ಲಿ ಎರಡೂ ವಿಷಯದಲ್ಲಿ ಒಂದೊಂದು ಹೆಚ್ಚು ಗಳಿಸಿ ತಲಾ 100 ಅಂಕಗಳೊಂದಿಗೆ ಒಟ್ಟು ಅಂಕಗಳನ್ನು 624ಕ್ಕೆ ಏರಿಸಿ ಈ ಸಾಧನೆ ಮಾಡಿದ್ದಾರೆ.

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ವಿದ್ಯಾಸಂಸ್ಥೆ ಕಳೆದ ಹತ್ತು ವರ್ಷಗಳಿಂದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಹಿತ ಇನ್ನಿತರ ಕಾರ್ಯ ಚಟುವಟಿಕೆಯಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕಿನಲ್ಲಿ ಸಾಧನೆಗೈದು ಹೆಸರುವಾಸಿಯಾಗಿದೆ. ಗ್ರಾಮೀಣ ಭಾಗದಲ್ಲಿರುವ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು, ಇಳಂತಿಲ, ತಣ್ಣೀರುಪಂತ, ಮಡಂತ್ಯಾರು, ಉರುವಾಲು, ಬಾರ್ಯ, ಮಚ್ಚಿನ ಗ್ರಾಮಗಳ ಹಾಗೂ ನೆರೆಯ ಬಂಟ್ವಾಳ ತಾಲೂಕಿನ ವಿವಿಧ ಗ್ರಾಮದ ವಿದ್ಯಾರ್ಥಿಗಳ ವಿದ್ಯಾಕೇಂದ್ರವಾಗಿದೆ ಎಲ್ ಸಿಆರ್ ಇಂಡಿಯನ್ ವಿದ್ಯಾಸಂಸ್ಥೆ. ದಶಮಾನೋತ್ಸವನ್ನು ಆಚರಿಸಿಕೊಂಡ ಸಂಭ್ರಮದಲ್ಲಿದ್ದ ಸಂಸ್ಥೆ ಇದೀಗ ರಾಜ್ಯವೇ ಗುರುತಿಸುವಂತಹ ಸಾಧನೆ ಮಾಡಿದ್ದು ಸಂಸ್ಥೆಯ ಸಾಧನೆಗಳ ಶಿಖರಕ್ಕೆ ಮತ್ತೊಂದು ಮೈಲ್ಲುಗಲ್ಲು ಸೇರ್ಪಡೆಯಾಗಿದೆ.

Related posts

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya
error: Content is protected !!