July 23, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ


ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಧ್ಯೇಯೋದ್ದೇಶಗಳನ್ನು ಈಡೇರಿಸುವ ಉದ್ದೇಶಕ್ಕಾಗಿ ಎರಡು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ಸರಕಾರ ನೇಮಕಗೊಳಿಸಿ ಆದೇಶ ನೀಡಿದೆ. ಜಗದೀಶ್ ಪ್ರಸಾದ್ ಅವರು ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್‌ಗಳ ಆಸೋಸಿಯೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಅವಧಿಯಲ್ಲಿ ತಾಲೂಕು ಮಟ್ಟದ ಸಿವಿಲ್ ಇಂಜಿನಿಯರ‍್ಸ್‌ಗಳ ಸಮಾವೇಶವನ್ನು ಸಂಘಟಿಸಿದ್ದರು. ಇವರು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿಯೂ ಜನಮನ್ನಣೆ ಗಳಿಸಿದ್ದಾರೆ.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಮೇ 29: ವಿದ್ಯುತ್ ನಿಲುಗಡೆ

Suddi Udaya
error: Content is protected !!