25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಜೋಡಣೆಗೊಳಿಸಿದ್ದ ಹಲಗೆಗಳನ್ನು ತೆರವುಗೊಳಿಸುವ ಕಾರ್ಯ ಸಣ್ಣ ನೀರಾವರಿ ಇಲಾಖೆಯಿಂದ ನಡೆಯುತ್ತಿದೆ. ಕಲ್ಮಂಜ ಗ್ರಾಮದ ನಿಡಿಗಲ್ ಕಿಂಡಿ ಅಣೆಕಟ್ಟಿಗೆ ಜೋಡಿಸಿದ್ದ ಹಲಗೆಯನ್ನು ಈಗಾಗಲೇ ತೆರವು ಮಾಡಲಾಗುತ್ತಿದ್ದು ತಾಲೂಕಿನಲ್ಲಿ 73 ಕಿಂಡಿ ಅಣೆಕಟ್ಟುಗಳಿದ್ದು ಮಳೆಗಾಲಕ್ಕಿಂತ ಮುಂಚಿತವಾಗಿ ಹಲಗೆ ಇರುವ ಅಣೆಕಟ್ಟುಗಳಿಂದ ತೆರವು ಕಾರ್ಯ ಮಾಡಲಾಗುತ್ತಿದೆ. ಕಳೆದ 3-4ದಿನಗಳಿಂದ ತೆರವು ಕಾರ್ಯ ಆರಂಭವಾಗಿದ್ದು ಮುಂಡಾಜೆ, ವೇಣೂರು ನಡ್ತಿಕಲ್ಲು, ಚಂದ್ಕೂರು, ಲಾಯಿಲ-ಪುತ್ರಬೈಲು, ಸುಲ್ಕೇರಿಮೊಗ್ರು, ಲಾಯಿಲ ರಾಘವೇಂದ್ರ ಮಠ ಸಹಿತ ವಿವಿಧ ಜೋಡಿಸಿದ್ದ ಹಲಗೆಗಳನ್ನು ತೆಗೆಯುತ್ತಿದ್ದು ಜೂನ್ ತಿಂಗಳ ಮೊದಲ ವಾರದಲ್ಲಿ ತೆರವು ಕಾರ್ಯ ಪೂರ್ಣಗೊಳ್ಳಲಿದೆ.

ಈ ಬಾರಿ ಬೇಸಿಗೆ ಮಳೆಯಿಂದಾಗಿ ಕಿಂಡಿ ಅಣೆಕಟ್ಟುಗಳಲ್ಲಿ ಭರಪೂರ ನೀರು ತುಂಬಿ ಜಲಧಾರೆ ಉಂಟಾಗಿತ್ತು. ಫೆಬ್ರವರಿ ಮತ್ತು ಮಾರ್ಚ ತಿಂಗಳಿನಲ್ಲಿ ಬಿಸಿಲ ತಾಪಕ್ಕೆ ಹೊಳೆ, ಹಳ್ಳಗಳಲ್ಲಿ ನೀರಿನ ಹರಿವು ಕಡಿಮೆಯಾಗಿತ್ತು ಆದರೆ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸುರಿದ ಬೇಸಿಗೆ ಮಳೆಗೆ ಸಮೃದ್ಧವಾಗಿ ಜೀವ ಜಲ ತುಂಬಿತ್ತು. ಅಣೆಕಟ್ಟಿನಲ್ಲಿ ನೀರು ಶೇಖರಣೆಯಾಗಿ ಕೃಷಿ ಭೂಮಿಗೆ ಸಹಕಾರಿಯಾಗಿದ್ದು, ಬಾವಿ, ಕೊಳವೆ ಬಾವಿ, ಕೆರೆಗಳಲ್ಲಿ ಅಂರ್ತಜಲ ವೃದ್ಧಿಗೆ ಸಹಕಾರಿಯಾಗಿದೆ. ಬೇಸಿಗೆ ಮಳೆ ನೀರಿನ ತತ್ವಾರವನ್ನು ನಿಗಿಸಿದೆ. ಕೆಲ ತಿಂಗಳ ಹಿಂದೆ ಮಾಧ್ಯಮಗಳ ನಿರಂತರ ವರದಿಗಳ ಬಳಿಕ ತಾಲೂಕಿನ ವಿವಿಧ ಅಣೆಕಟ್ಟುಗಳಲ್ಲಿ ಹಲಗೆ ಜೋಡಣೆ ಕಾರ್ಯ ಚುರುಕು ಪಡೆದಿತ್ತು.

-ವರದಿ ಮನೀಶ್ ವಿ.ಅಂಚನ್ ಕುಕ್ಕಿನಡ್ಡ

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
error: Content is protected !!