23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮುಂಡಾಜೆ: ದಿಡುಪೆ- ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಮೇ 22 ರಂದು ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.


ರಿಕ್ಷಾ ಚಾಲಕ ಮುಂಡಾಜೆ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರಿಗೂ ಶಸ್ತ್ರಚಿಕಿತ್ಸೆ ನಡೆಸಬೇಕಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ 7 ಕಿಮೀ ವ್ಯಾಪ್ತಿಯ ರಸ್ತೆಯ ಸುಮಾರು 6 ಕಡೆಗಳಲ್ಲಿ ಕಿರು ಸೇತುವೆಗಳಿದ್ದು ಅವು ಅಗಲ ಕಿರಿದಾದ ಕಾರಣ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಕಳೆದ 7 ವರ್ಷಗಳ ಹಿಂದೆ ಈ ರಸೆ ವಿಸ್ತರಣೆಯಾಗಿದ್ದು ಈ ಸಮಯ ಈ ಕಿರುಸೇತುವೆಗಳ ಅಭಿವೃದ್ಧಿ ಕಾಮಗಾರಿ ನಡೆದಿರಲಿಲ್ಲ. ಇದರ ಬಳಿಕ ಜನಪ್ರತಿನಿಧಿ, ಇಲಾಖೆಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ.


ಶಿಥಿಲ ಕಿರು ಸೇತುವೆಗಳಿರುವ ಈ ರಸ್ತೆಯಲ್ಲಿ ಕಳೆದ ಮಳೆಗಾಲದಲ್ಲಿ ಜಿಲ್ಲಾಧಿಕಾರಿ ಸಂಚಾರ ನಿಷೇಧವನ್ನು ಹೇಳಿದ್ದರು. ಆದರೂ ಈ ಅಪಾಯದ ಮಧ್ಯೆ ಇಲ್ಲಿ ವಾಹನ ಸಂಚಾರ ಯಾವುದೇ ಎಗ್ಗಿಲ್ಲದೆ ನಡೆಯುತ್ತಿತ್ತು.
ಇಲ್ಲಿನ ಕೆಲವು ಕಿರು ಸೇತುವೆಗಳು ಸಂಪೂರ್ಣ ಶಿಥಿಲವಾಸ್ಥೆ ತಲುಪಿದ್ದು ಯಾವುದೇ ಕ್ಷಣದಲ್ಲಿ ಧರಾಶಾಯಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ವಿಷ್ಣು ಭಟ್ ತಿಳಿಸಿದ್ದಾರೆ.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
error: Content is protected !!