September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರಾಗಿದ್ದಾರೆ.
ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು ಈ ವೇಳೆ ಪ್ರವೀಣ್ ಓಡಿ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ.

ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!