25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ


ಅರಸಿನಮಕ್ಕಿ: ಇಲ್ಲಿನ ಪಲಸ್ತಡ್ಕದ ನಿವಾಸಿಗಳಾದ ಕೃಷಿ ಕೂಲಿ ಕಾರ್ಮಿಕ ದಂಪತಿ ಸುಂದರಿ- ಸುಕುಮಾರ್ ಶೆಟ್ಟಿಯವರ ಪುತ್ರ ವಿಜೇತ್ ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿ ಎಸ್ಸೆ ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರ ಮನೆಗೆ ಅರಸಿನಮಕ್ಕಿಯ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶನಿವಾರ ತೆರಳಿ ಅಭಿನಂದಿಸಿದರು.


ಪ್ರತಿಭಾನ್ವಿತ ವಿದ್ಯಾರ್ಥಿಯಾದ ವಿಜೇತ್ ಸಿದ್ಧಿ ವಿನಾಯಕ ಭಜನಾ ತಂಡ ಹೊಸ್ತೋಟದ ಸದಸ್ಯ, ಅರೆಸ್ಸೆಸ್ ನ ಮುಖ್ಯ ಶಿಕ್ಷ ಕ್ ಕೂಡ ಆಗಿದ್ದಾನೆ. ಈತನಿಗೆ ಗುರುವಾಯನಕೆರೆಯ ಎಕ್ಸೆ ಲ್ ಕಾಲೇಜಿನಲ್ಲಿ ಪಿಯುಸಿಗೆ ಉಚಿತವಾಗಿ ಪ್ರವೇಶಾತಿ ದೊರಕಿರುತ್ತದೆ.
ಸನ್ಮಾನ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂ. ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ. ಎಸ್., ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಪ್ರೌಢಶಾಲೆಯ ಎಸ್ ಡಿ. ಎಂ. ಸಿ. ಅಧ್ಯಕ್ಷ ಗಣೇಶ್ ಪಲಸ್ತಡ್ಕ, ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ., ಅಭಿನಯ ಭಟ್ ಮೊದಲಾದವರಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya
error: Content is protected !!