24.4 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

ಕಡಬ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ಯಾರಿಯರ್ ಟ್ರೈನಿಂಗ್ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಸ್‌ಒ 9001:2015 ಪ್ರಮಾಣೀಕೃತ ಐಐಸಿಟಿ ಶಿಕ್ಷಣ ಸಂಸ್ಥೆಯು ಶ್ಲಾಘನೀಯ ಸಾಧನೆ ಮಾಡಿದೆ.

ಈ ಸಂಸ್ಥೆಯಲ್ಲಿ ನಡೆದ ಮೊಂಟೆಸ್ಸರಿ (ನರ್ಸರಿ ಟೀಚರ್ ಟ್ರೈನಿಂಗ್) ಪರೀಕ್ಷೆಗೆ ಹಾಜರಾದ ಎಲ್ಲ 11 ವಿದ್ಯಾರ್ಥಿನಿಯರೂ ಶೇ.100 ಫಲಿತಾಂಶದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಆಶಾರೋಸ್ ಸುಂಕದಕಟ್ಟೆ(97%), ವೈಶಾಲಿ ಕೋಡಿಂಬಾಡಿ(96%), ಅಸಿಯಮ್ಮ ಮರ್ದಾಳ(94%), ಸೌಮ್ಯ ಕೆ ಕುಟ್ರುಪಾಡಿ(94%), ನಸೀಮಾ ಎಚ್ ನೆಲ್ಯಾಡಿ(94%), ಸುರೂರತ್ ಎಂ.ಎಸ್ ಕಡಬ(93%), ಸಂಧ್ಯಾ ಕುಮಾರಿ ಬಿ ಬೆಟ್ಟಂಪಾಡಿ(93%), ಸಂಧ್ಯಾ ಅರಸಿನಮಕ್ಕಿ(93%), ಪುಲಕಿತ ಕೆ.ಪಿ ಪೇರಾಬೆ(91%), ಫಾತಿಮಾ ಅನಿಸಾ ಮರ್ದಾಳ(90%) ಹಾಗೂ ಸ್ವಾತಿ ಎಸ್ ಶಿಶಿಲ(90%) ಅಂಕ ಪಡೆದು ಉತ್ತೀರ್ಣರಾಗಿ,ಈಗಾಗಲೇ ವಿವಿಧ ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕಿಯರಾಗಿ ನೇಮಕಗೊಂಡಿದ್ದಾರೆ.

ಅತ್ಯುತ್ತಮ ಗುಣ ಮಟ್ಟದ ಶಿಕ್ಷಣವನ್ನೂ, ಅತಿ ಕಡಿಮೆ ಶುಲ್ಕದೊಂದಿಗೆ ನುರಿತ ಅಧ್ಯಾಪಕರಿಂದ ಶಿಸ್ತಿನ ಬೋಧನೆಯನ್ನೂ ಒದಗಿಸುವ ಈ ಸಂಸ್ಥೆಯು ಉಚಿತ ಕಂಪ್ಯೂಟರ್ ತರಬೇತಿ, ಸ್ಪೋಕನ್ ಇಂಗ್ಲಿಷ್, ಕರಕುಶಲ ತರಬೇತಿ, ಪ್ರತಿಷ್ಠಿತ ಶಾಲೆಗಳಲ್ಲಿ ಇಂಟರ್ನ್‌ಶಿಪ್, ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳ ಸಹಿತ ಉತ್ತಮ ಅವಕಾಶಗಳನ್ನು ಕಲ್ಪಿಸಿದೆ. ಇದೊಂದು ಜಾಬ್ ಓರಿಯೆಂಟೆಡ್ ಕೋರ್ಸ್ ಆಗಿದ್ದು, ತರಬೇತಿ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೆ ಉದ್ಯೋಗದ ಭರವಸೆ ನೀಡುತ್ತಿದೆ.

2025–26ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತರು 9448409912 ಅಥವಾ 9743271502 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya
error: Content is protected !!