July 23, 2026
Uncategorized

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

ಕೊಯ್ಯೂರು: ಇಲ್ಲಿಯ ಬರೆಮೇಲು ಕಾಂತಪ್ಪ ಗೌಡ ಹಾಗೂ ಶ್ರೀಮತಿ ಅಶ್ವಿನಿ ಇವರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮವು ನಡೆಯಿತು.


ಭಜನಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಯ ಪುರುಷರ, ಮಕ್ಕಳ ಮತ್ತು ಮಹಿಳೆಯರ ಹಾಗೂ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿಯ ಮಕ್ಕಳ ತಂಡಗಳ ಸದಸ್ಯರುಗಳು ಆಗಮಿಸಿ ಭಜನಾ ಸೇವೆಯನ್ನು ನಡೆಸಿಕೊಟ್ಟರು.


ಭಜನೆಗೆ ಆಗಮಿಸಿದಂತಹ ಎಲ್ಲಾ ಭಜಕ ವಿದ್ಯಾರ್ಥಿಗಳಿಗೆ ಕಾಂತಪ್ಪ ಗೌಡ ಹಾಗೂ ಮನೆಯವರು ಪುಸ್ತಕಗಳನ್ನು ನೀಡಿ ಗೌರವಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಗೆ ಒಂದು ಮೇಜನ್ನು ( ಟೇಬಲ್) ಕೊಡುಗೆಯಾಗಿ ನೀಡಿ ಮಂದಿರದ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಜನಾ ಮಂದಿರದ ಪದಾಧಿಕಾರಿಗಳೊಂದಿಗೆ ಕೈಜೋಡಿಸಿದರು.


ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಖಾಸು, ಗೌರವಾಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಪಿ ಬಾಲಕೃಷ್ಣ ಸಾಲ್ಯಾನ್, ಮಹಿಳಾ ತಂಡದ ಅಧ್ಯಕ್ಷೆಯಾದ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ, ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ತಾರಾನಾಥ ಗೌಡ, ಕೊಯ್ಯೂರು ಶ್ರೀ ಪಂಚದುರ್ಗ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!