27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!