23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya
error: Content is protected !!