July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya
error: Content is protected !!