September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ 05 ರಿಂದ 19 ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್‌ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಉಪಾಧ್ಯಕ್ಷೆ ಶ್ರೀಮತಿ ವಿಜಯ ರಾಮಣ್ಣ, ಸದಸ್ಯ ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಜಾತ ಜಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಾದ ಕು. ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ ಸ್ವಾಗತಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ,ಎಲ್ ಸಿ ಆ‌ರ್ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕು| ಚಾರ್ವಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ತುಳಸಿ ದಿನೇಶ ಧನ್ಯವಾದವಿತ್ತರು.

Related posts

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya
error: Content is protected !!