September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

ಕಡಬ: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ಯಾರಿಯರ್ ಟ್ರೈನಿಂಗ್ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಸ್‌ಒ 9001:2015 ಪ್ರಮಾಣೀಕೃತ ಐಐಸಿಟಿ ಶಿಕ್ಷಣ ಸಂಸ್ಥೆಯು ಶ್ಲಾಘನೀಯ ಸಾಧನೆ ಮಾಡಿದೆ.

ಈ ಸಂಸ್ಥೆಯಲ್ಲಿ ನಡೆದ ಮೊಂಟೆಸ್ಸರಿ (ನರ್ಸರಿ ಟೀಚರ್ ಟ್ರೈನಿಂಗ್) ಪರೀಕ್ಷೆಗೆ ಹಾಜರಾದ ಎಲ್ಲ 11 ವಿದ್ಯಾರ್ಥಿನಿಯರೂ ಶೇ.100 ಫಲಿತಾಂಶದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಆಶಾರೋಸ್ ಸುಂಕದಕಟ್ಟೆ(97%), ವೈಶಾಲಿ ಕೋಡಿಂಬಾಡಿ(96%), ಅಸಿಯಮ್ಮ ಮರ್ದಾಳ(94%), ಸೌಮ್ಯ ಕೆ ಕುಟ್ರುಪಾಡಿ(94%), ನಸೀಮಾ ಎಚ್ ನೆಲ್ಯಾಡಿ(94%), ಸುರೂರತ್ ಎಂ.ಎಸ್ ಕಡಬ(93%), ಸಂಧ್ಯಾ ಕುಮಾರಿ ಬಿ ಬೆಟ್ಟಂಪಾಡಿ(93%), ಸಂಧ್ಯಾ ಅರಸಿನಮಕ್ಕಿ(93%), ಪುಲಕಿತ ಕೆ.ಪಿ ಪೇರಾಬೆ(91%), ಫಾತಿಮಾ ಅನಿಸಾ ಮರ್ದಾಳ(90%) ಹಾಗೂ ಸ್ವಾತಿ ಎಸ್ ಶಿಶಿಲ(90%) ಅಂಕ ಪಡೆದು ಉತ್ತೀರ್ಣರಾಗಿ,ಈಗಾಗಲೇ ವಿವಿಧ ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕಿಯರಾಗಿ ನೇಮಕಗೊಂಡಿದ್ದಾರೆ.

ಅತ್ಯುತ್ತಮ ಗುಣ ಮಟ್ಟದ ಶಿಕ್ಷಣವನ್ನೂ, ಅತಿ ಕಡಿಮೆ ಶುಲ್ಕದೊಂದಿಗೆ ನುರಿತ ಅಧ್ಯಾಪಕರಿಂದ ಶಿಸ್ತಿನ ಬೋಧನೆಯನ್ನೂ ಒದಗಿಸುವ ಈ ಸಂಸ್ಥೆಯು ಉಚಿತ ಕಂಪ್ಯೂಟರ್ ತರಬೇತಿ, ಸ್ಪೋಕನ್ ಇಂಗ್ಲಿಷ್, ಕರಕುಶಲ ತರಬೇತಿ, ಪ್ರತಿಷ್ಠಿತ ಶಾಲೆಗಳಲ್ಲಿ ಇಂಟರ್ನ್‌ಶಿಪ್, ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳ ಸಹಿತ ಉತ್ತಮ ಅವಕಾಶಗಳನ್ನು ಕಲ್ಪಿಸಿದೆ. ಇದೊಂದು ಜಾಬ್ ಓರಿಯೆಂಟೆಡ್ ಕೋರ್ಸ್ ಆಗಿದ್ದು, ತರಬೇತಿ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೆ ಉದ್ಯೋಗದ ಭರವಸೆ ನೀಡುತ್ತಿದೆ.

2025–26ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತರು 9448409912 ಅಥವಾ 9743271502 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya
error: Content is protected !!