25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

ಕೊಯ್ಯೂರು: ಇಲ್ಲಿಯ ಬರೆಮೇಲು ಕಾಂತಪ್ಪ ಗೌಡ ಹಾಗೂ ಶ್ರೀಮತಿ ಅಶ್ವಿನಿ ಇವರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮವು ನಡೆಯಿತು.


ಭಜನಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಯ ಪುರುಷರ, ಮಕ್ಕಳ ಮತ್ತು ಮಹಿಳೆಯರ ಹಾಗೂ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿಯ ಮಕ್ಕಳ ತಂಡಗಳ ಸದಸ್ಯರುಗಳು ಆಗಮಿಸಿ ಭಜನಾ ಸೇವೆಯನ್ನು ನಡೆಸಿಕೊಟ್ಟರು.


ಭಜನೆಗೆ ಆಗಮಿಸಿದಂತಹ ಎಲ್ಲಾ ಭಜಕ ವಿದ್ಯಾರ್ಥಿಗಳಿಗೆ ಕಾಂತಪ್ಪ ಗೌಡ ಹಾಗೂ ಮನೆಯವರು ಪುಸ್ತಕಗಳನ್ನು ನೀಡಿ ಗೌರವಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಗೆ ಒಂದು ಮೇಜನ್ನು ( ಟೇಬಲ್) ಕೊಡುಗೆಯಾಗಿ ನೀಡಿ ಮಂದಿರದ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಜನಾ ಮಂದಿರದ ಪದಾಧಿಕಾರಿಗಳೊಂದಿಗೆ ಕೈಜೋಡಿಸಿದರು.


ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಖಾಸು, ಗೌರವಾಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಪಿ ಬಾಲಕೃಷ್ಣ ಸಾಲ್ಯಾನ್, ಮಹಿಳಾ ತಂಡದ ಅಧ್ಯಕ್ಷೆಯಾದ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ, ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ತಾರಾನಾಥ ಗೌಡ, ಕೊಯ್ಯೂರು ಶ್ರೀ ಪಂಚದುರ್ಗ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya
error: Content is protected !!