24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

ಕೊಯ್ಯೂರು: ಇಲ್ಲಿಯ ಬರೆಮೇಲು ಕಾಂತಪ್ಪ ಗೌಡ ಹಾಗೂ ಶ್ರೀಮತಿ ಅಶ್ವಿನಿ ಇವರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮವು ನಡೆಯಿತು.


ಭಜನಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಯ ಪುರುಷರ, ಮಕ್ಕಳ ಮತ್ತು ಮಹಿಳೆಯರ ಹಾಗೂ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿಯ ಮಕ್ಕಳ ತಂಡಗಳ ಸದಸ್ಯರುಗಳು ಆಗಮಿಸಿ ಭಜನಾ ಸೇವೆಯನ್ನು ನಡೆಸಿಕೊಟ್ಟರು.


ಭಜನೆಗೆ ಆಗಮಿಸಿದಂತಹ ಎಲ್ಲಾ ಭಜಕ ವಿದ್ಯಾರ್ಥಿಗಳಿಗೆ ಕಾಂತಪ್ಪ ಗೌಡ ಹಾಗೂ ಮನೆಯವರು ಪುಸ್ತಕಗಳನ್ನು ನೀಡಿ ಗೌರವಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಗೆ ಒಂದು ಮೇಜನ್ನು ( ಟೇಬಲ್) ಕೊಡುಗೆಯಾಗಿ ನೀಡಿ ಮಂದಿರದ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಜನಾ ಮಂದಿರದ ಪದಾಧಿಕಾರಿಗಳೊಂದಿಗೆ ಕೈಜೋಡಿಸಿದರು.


ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಖಾಸು, ಗೌರವಾಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಪಿ ಬಾಲಕೃಷ್ಣ ಸಾಲ್ಯಾನ್, ಮಹಿಳಾ ತಂಡದ ಅಧ್ಯಕ್ಷೆಯಾದ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ, ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ತಾರಾನಾಥ ಗೌಡ, ಕೊಯ್ಯೂರು ಶ್ರೀ ಪಂಚದುರ್ಗ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!