37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!