22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya
error: Content is protected !!