26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ಸುಬ್ರಹ್ಮಣ್ಯ ರೋಟರಿ ಹಾಗೂ ಸೀನಿಯರ್ ಚೇಂಬರ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya
error: Content is protected !!