26.4 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯ ಒಕ್ಕೂಟಗಳ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಸಾನ್ ಟವರ್ ಬೆಳ್ತಂಗಡಿ ಇಲ್ಲಿ ಮೇ 23 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಕಿರಣ್ ಜಿಲ್ಲಾಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಧನೇಶ್ವರಿ ಪ್ರಾಧ್ಯಾಪಕರು, ಸಮಾಜ ಕಾರ್ಯ ವಿಭಾಗ, ಎಸ್.ಡಿ.ಎಮ್. ಕಾಲೇಜು ಉಜಿರೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಸ್ವಾಗತಿಸಿದರು. ಕಿರಣ್ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಿಶಾ ವಂದಿಸಿದರು. ಸ್ನೇಹಕಿರಣ್ ಜಿಲ್ಲಾ ಒಕ್ಕೂಟದ ಕೋಶಾಧಿಕಾರಿ ಶ್ರೀಮತಿ ಮಂಜುಳಾ ಜೋನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಸಂಘಗಳಿಂದ ಆಯ್ಕೆ ಮಾಡಿರುವ ವಿವಿಧ ಕ್ರಿಯಾಶೀಲ ನಾಯಕರುಗಳು ಪಾಲ್ಗೊಂಡರು.

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!