24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯ ಒಕ್ಕೂಟಗಳ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಸಾನ್ ಟವರ್ ಬೆಳ್ತಂಗಡಿ ಇಲ್ಲಿ ಮೇ 23 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಕಿರಣ್ ಜಿಲ್ಲಾಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಧನೇಶ್ವರಿ ಪ್ರಾಧ್ಯಾಪಕರು, ಸಮಾಜ ಕಾರ್ಯ ವಿಭಾಗ, ಎಸ್.ಡಿ.ಎಮ್. ಕಾಲೇಜು ಉಜಿರೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಬಗ್ಗೆ ತರಬೇತಿ ನೀಡಿದರು.

ಡಿ.ಕೆ.ಆರ್.ಢಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ಜಿನ್ಸಿ ರಾಜೇಶ್ ಸ್ವಾಗತಿಸಿದರು. ಕಿರಣ್ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಿಶಾ ವಂದಿಸಿದರು. ಸ್ನೇಹಕಿರಣ್ ಜಿಲ್ಲಾ ಒಕ್ಕೂಟದ ಕೋಶಾಧಿಕಾರಿ ಶ್ರೀಮತಿ ಮಂಜುಳಾ ಜೋನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಸಂಘಗಳಿಂದ ಆಯ್ಕೆ ಮಾಡಿರುವ ವಿವಿಧ ಕ್ರಿಯಾಶೀಲ ನಾಯಕರುಗಳು ಪಾಲ್ಗೊಂಡರು.

Related posts

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!