27.3 C
ಪುತ್ತೂರು, ಬೆಳ್ತಂಗಡಿ
May 24, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ 05 ರಿಂದ 19 ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್‌ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಉಪಾಧ್ಯಕ್ಷೆ ಶ್ರೀಮತಿ ವಿಜಯ ರಾಮಣ್ಣ, ಸದಸ್ಯ ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಜಾತ ಜಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಾದ ಕು. ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ ಸ್ವಾಗತಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ,ಎಲ್ ಸಿ ಆ‌ರ್ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕು| ಚಾರ್ವಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ತುಳಸಿ ದಿನೇಶ ಧನ್ಯವಾದವಿತ್ತರು.

Related posts

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
error: Content is protected !!