September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಿತ್ತಬಾಗಿಲು ಗ್ರಾಮ ಪಂಚಾಯತ್ ಅರಿವು ಮತ್ತು ಮಾಹಿತಿ ಕೇಂದ್ರದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ ಕಛೇರಿ ಸಭಾಂಗಣದಲ್ಲಿ ಮೇ 05 ರಿಂದ 19 ರವರೆಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್‌ ಅಧ್ಯಕ್ಷ ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಿತು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಉಪಾಧ್ಯಕ್ಷೆ ಶ್ರೀಮತಿ ವಿಜಯ ರಾಮಣ್ಣ, ಸದಸ್ಯ ಚಂದ್ರ ಶೇಖರ ಗೌಡ, ಸುಜ್ಞಾನ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸುಜಾತ ಜಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳಾದ ಕು. ಹಂಶಿಕಾ ಮತ್ತು ವರ್ಷಿಣಿ ಪ್ರಾರ್ಥಿಸಿ, ಗ್ರಂಥಾಲಯ ಮೇಲ್ವಿಚಾರಕಿ ಸುಜಾತ ಜಿ ಸ್ವಾಗತಿಸಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಸುಜ್ಞಾನ ಸಂಜೀವಿನಿ ಮಹಿಳಾ ಒಕ್ಕೂಟದ ಎಂ.ಬಿ.ಕೆ,ಎಲ್ ಸಿ ಆ‌ರ್ ಪಿ, ಕೃಷಿ ಸಖಿ, ಪಶು ಸಖಿ ಮತ್ತು ಸದಸ್ಯರು ಹಾಜರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕು| ಚಾರ್ವಿ ಮೋಹನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ತುಳಸಿ ದಿನೇಶ ಧನ್ಯವಾದವಿತ್ತರು.

Related posts

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya
error: Content is protected !!