27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಚಂಡ ಮಾರುತದ ಭೀತಿ ಎದುರಾಗಿದೆ. ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಳೆ ವರ್ಷಧಾರೆಯ ಆರಂಭಕ್ಕೆ ಮುನ್ನಡಿ ದೊರೆತಂತೆ ಆಗಿದೆ. ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಮೇ 28 ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 103 ಮಿ.ಮೀ. ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ತೋಡು, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ತಾಲೂಕಿನ ರಸ್ತೆಗಳು ಚರಂಡಿ ವ್ಯವಸ್ಥೆ ಇಲ್ಲದೆ ಹೊಳೆಯಂತಾಗಿದೆ. ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಸವಾರರು ಹರಸಾಹಸ ಪಡುವಂತಾಗಿದೆ.ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಬೆಳ್ತಂಗಡಿ ಮಳೆ ಪ್ರಮಾಣ:
ಬೆಳ್ತಂಗಡಿ: 87.4, ಧರ್ಮಸ್ಥಳ: 67.0, ಕೊಕ್ಕಡ :56.6, ನಾರಾವಿ: 82.6, ವೇಣೂರು: 48.6, ಸುಲ್ಕೇರಿ: 145.0, ಕುಕ್ಕಳ: 140.0,
ಒಟ್ಟು: 627.2, ಸರಾಸರಿ: 89.6 ಪ್ರಮಾಣ ಮಳೆಯಾಗಿದೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya
error: Content is protected !!