23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

ಕೊಯ್ಯೂರು: ಇಲ್ಲಿಯ ಬರೆಮೇಲು ಕಾಂತಪ್ಪ ಗೌಡ ಹಾಗೂ ಶ್ರೀಮತಿ ಅಶ್ವಿನಿ ಇವರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮವು ನಡೆಯಿತು.


ಭಜನಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಯ ಪುರುಷರ, ಮಕ್ಕಳ ಮತ್ತು ಮಹಿಳೆಯರ ಹಾಗೂ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿಯ ಮಕ್ಕಳ ತಂಡಗಳ ಸದಸ್ಯರುಗಳು ಆಗಮಿಸಿ ಭಜನಾ ಸೇವೆಯನ್ನು ನಡೆಸಿಕೊಟ್ಟರು.


ಭಜನೆಗೆ ಆಗಮಿಸಿದಂತಹ ಎಲ್ಲಾ ಭಜಕ ವಿದ್ಯಾರ್ಥಿಗಳಿಗೆ ಕಾಂತಪ್ಪ ಗೌಡ ಹಾಗೂ ಮನೆಯವರು ಪುಸ್ತಕಗಳನ್ನು ನೀಡಿ ಗೌರವಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಇಲ್ಲಿಗೆ ಒಂದು ಮೇಜನ್ನು ( ಟೇಬಲ್) ಕೊಡುಗೆಯಾಗಿ ನೀಡಿ ಮಂದಿರದ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಜನಾ ಮಂದಿರದ ಪದಾಧಿಕಾರಿಗಳೊಂದಿಗೆ ಕೈಜೋಡಿಸಿದರು.


ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ , ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಖಾಸು, ಗೌರವಾಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಓಬಯ್ಯ ನಾಯ್ಕ, ಕೋಶಾಧಿಕಾರಿ ಪಿ ಬಾಲಕೃಷ್ಣ ಸಾಲ್ಯಾನ್, ಮಹಿಳಾ ತಂಡದ ಅಧ್ಯಕ್ಷೆಯಾದ ಶ್ರೀಮತಿ ಪೂರ್ಣಿಮಾ ಹೇಮಂತ್ ಗೌಡ, ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ತಾರಾನಾಥ ಗೌಡ, ಕೊಯ್ಯೂರು ಶ್ರೀ ಪಂಚದುರ್ಗ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!