32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ಆರ್ಕಿಟೆಕ್ಚರ್ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್)೨೦೨೫ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-೯೯.೪೦೯೩೩೫೯ ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ ಆರನೇ ರ‍್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ.


ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ (ಂIಖ ೧೦೧), ಟಿ ಪ್ರದೀಪ್ (ಂIಖ ೧೧೭),ಮೋನಿಕಾ ಕೆ ಎ(ಂIಖ ೧೪೦), ಸುಧಾಂಶು ಪಾಲೇಕರ್ (ಂIಖ ೨೬೮), ಪ್ರತಿಕ್ ಎನ್ ಶೆಟ್ಟಿ (ಂIಖ ೩೬೨), ತ್ರಿಶ್ಲಾ ಗಾಂಧಿ (ಂIಖ ೪೨೩), ರೋಹಿತ್ ಜಿ ಬಿ -(ಂIಖ ೪೬೧), ಸಾಚಿ ಶಿವಕುಮಾರ್ -(ಂIಖ ೪೮೪), ಚಿನ್ಮಯಿ ಆರ್-(ಂIಖ ೫೧೯), ಮನೋಜ್ ಎಂ ಆರ್ -(ಂIಖ ೮೪೬), ಚೇತನ್ ಗೌಡ -(ಂIಖ ೮೬೭), ಆಕಾಶ್ ದೇವಾಡಿಗ -(ಂIಖ ೯೮೦) ಕೆಟಗರಿ ವಿಭಾಗದಲ್ಲಿ ರ‍್ಯಾಂಕ್ ಗಳಿಸಿದ್ದಾರೆ. ೫೦೦ ರ‍್ಯಾಂಕ್ ಒಳಗೆ ೧೦ ಮಂದಿ, ೧೦೦೦ ರಾಂಕ್ ಒಳಗೆ ೧೪ ಮಂದಿ ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ರಾಷ್ಟçದ ಪ್ರತಿಷ್ಠಿತ ಸಂಸ್ಥೆಗಳಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.


ರಾಷ್ಟçದ ಅತ್ಯುನ್ನತ ಸಂಸ್ಥೆಯಾದ ಐ.ಐ.ಟಿ. ಹಾಗೂ ಇನ್ನಿತರ ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ಬಿ. ಆರ್ಕ್ ಕೋರ್ಸಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಗೆ ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿದ್ದು ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.


ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಹಾಗೂ ಜೆ.ಇ.ಇ. ಬಿ. ಆರ್ಕ್ ಪರೀಕ್ಷೆಯ ಸಂಯೋಜಕರಾದ ಸುಮಂತ್ ದಾಮ್ಲೆ, ರಕ್ಷಿತ್ ಬಿ.ಎಸ್, ಶರತ್ ರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya
error: Content is protected !!