24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
error: Content is protected !!