September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

ಬೆಳ್ತಂಗಡಿ: ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು – ಜೋಡುಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ಸವಾರರು ಓಡಾಟ ಶೋಚನೀಯ ವಾಗಿದೆ. ರಸ್ತೆ ಅಭಿವೃದ್ಧಿ ಕುರಿತು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಕಾಯಕಲ್ಪ ದೊರೆಯದೆ ನಾಗರೀಕರ ಬದುಕು ದುಸ್ತರವಾಗಿದೆ.

ಸುಮಾರು 700 ಮೀಟರ್ ಉದ್ದವಿರುವ ಜಿಲ್ಲಾ ಪಂಚಾಯತ್ ರಸ್ತೆ ಇದಾಗಿದ್ದು ಡಾಮರು ಜಲ್ಲಿಕಲ್ಲುಗಳು ಎದ್ದು ಹೋಗಿ ಮಣ್ಣಿನ ಮಾರ್ಗ ನಿರ್ಮಾಣವಾಗಿದ್ದು ಎಡೆಬಿಡದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಕೆಸರುಮಯಗೊಂಡಿದ್ದು ಓಡಾಡಲು ಅಸಾಧ್ಯವಾದ ರೀತಿಯಲ್ಲಿದೆ.

ಶೋಚನೀಯ ಸ್ಥಿತಿಯಲ್ಲಿ ಇರುವ ಈ ರಸ್ತೆ ಅಭಿವೃದ್ಧಿ ಕುರಿತು ಸತತ ಏಳು ವರ್ಷಗಳಿಂದ ಹಲವಾರು ಬಾರಿ ಮನವಿ ಸಲ್ಲಿಸಿದರು ಜನಪ್ರತಿನಿಧಿಗಳ ಭರವಸೆ ನೀಡುತ್ತಾರೆ ಹೊರತು ಕಾಯಕಲ್ಪ ಹಾದಿ ಇನ್ನೂ ಕಂಡಿಲ್ಲ‌.

ತೆಕ್ಕಾರು ಪ್ಯಾಕ್ಸ್, ನ್ಯಾಯ ಬೆಲೆ, ಶಾಲೆಗೆ ಹೋಗುವ ಪ್ರಮುಖ ರಸ್ತೆಯಾಗಿದೆ. ಬಸ್. ಸಂಚಾರವೂ ಇದ್ದು ಇದೀಗ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಜನರು ನಡೆದುಕೊಂಡು ಹೋಗಲು ಅಸಾಧ್ಯಗೊಂಡಿರುವ ಸ್ಥಿತಿಯಲ್ಲಿದೆ. ಸಂಬಂಧಪಟ್ಟ ಇಲಾಖೆ ಗಮನಹರಿಸಿ ಸೂಕ್ತ ರೀತಿಯಲ್ಲಿ ರಸ್ತೆಗೆ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹ.
ವರದಿ :ಮನೀಷ್ ವಿ.ಅಂಚನ್ ಕುಕ್ಕಿನಡ್ಡ

Related posts

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya
error: Content is protected !!